ಕೇಂದ್ರ ಸರ್ಕಾರದ ಒಪ್ಪಿಗೆ ಬೆನ್ನಲ್ಲೇ BPL ಕಾರ್ಡ್‌ದಾರರಿಗೆ ಹೊಸ ಆದೇಶ!

ಹಲೋ ಸ್ನೇಹಿತರೆ, ಅನ್ನಭಾಗ್ಯ ಯೋಜನೆ ಅಡಿ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಇಷ್ಟು ದಿನ ರಾಜ್ಯ ಸರ್ಕಾರ 5 ಕೆ.ಜಿ ಅಕ್ಕಿ ಹಾಗೂ ಇನ್ನೂ 5 ಕೆಜಿ ಅಕ್ಕಿಯ ಬದಲು ಡಿಬಿಟಿ ಮೂಲಕ ಮನೆಯಲ್ಲಿ ಎಷ್ಟು ಸದಸ್ಯರು ಇರುತ್ತಾರೆ ಅಷ್ಟು ಮೊತ್ತದ ಹಣ ಸಂದಾಯ ಮಾಡುತ್ತಿತ್ತು. ಆದರೆ ಇದೀಗ ಕೇಂದ್ರ ಸರ್ಕಾರಕ್ಕೆ ನೀಡಲು ಒಪ್ಪಿಗೆ ಸೂಚಿಸಿದ್ದರಿಂದ ಇನ್ನು ಮುಂದೆ ಹಣದ ಬದಲಾಗಿ ಅಕ್ಕಿ ನೀಡಲಾಗುತ್ತದೆ ಎಂದು ಆಹಾರ ಸಚಿವ ಕೆ.ಎಚ್ ಮುನಿಯಪ್ಪ ತಿಳಿಸಿದರು.

BPL Card Scheme

ಕಲ್ಬುರ್ಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ರಾಜ್ಯಕ್ಕೆ ಆಯ್ಕೆಕೊಡಲು ಇದೀಗ ಮುಂದಾಗಿದೆ. ಬಿಪಿಎಲ್ ಫಲಾನುಭವಿಗಳಿಗೆ ಆದಷ್ಟು ಬೇಗ ಅಕ್ಕಿ ನೀಡುತ್ತೇವೆ. ಇಷ್ಟು ದಿನ ಡಿಬಿಟಿ ಮೂಲಕ ಹಣ ಹಾಕಲಾಗುತ್ತಿತ್ತು. ಇದೀಗ ಹಣ ಹಾಕುವ ಬದಲು ಜನರಿಗೆ ಅಕ್ಕಿ ಕೊಡುತ್ತೇವೆ ಎಂದರು.

ಇದನ್ನು ಓದಿ: ಮೋದಿ ಹುಟ್ಟು ಹಬ್ಬದ ಪ್ರಯುಕ್ತ 32,000 ಫಲಾನುಭವಿಗಳಿಗೆ ಮಂಜೂರಾತಿ ಪತ್ರ ವಿತರಣೆ!

ಬಡತನ ಗಿಂತ ಕೆಳಗಿರುವವರಿಗೆ ಮಾತ್ರ BPL ಕಾರ್ಡ್ ಮುಂದುವರಿಸುತ್ತೇವೆ. ಅನರ್ಹ ಬಿಪಿಎಲ್ ಕಾರ್ಡ್ಗಳನ್ನು ರದ್ದು ಮಾಡಲು ಸೂಚಿಸಲಾಗಿದೆ. ಇನ್ನು ಹೊಸ ಬಿಪಿಎಲ್ ಕಾರ್ಡ್ ಗಾಗಿ ಸಾಕಷ್ಟು ಅರ್ಜಿಗಳು ಬಂದಿವೆ. ಸರ್ವರ್ ಸಮಸ್ಯೆ ಬಗೆಹರಿಸಿ ಅರ್ಹರಿಗೆ ಬಿಪಿಎಲ್ ಕಾರ್ಡ್ ನೀಡುತ್ತೇವೆ ಎಂದು ಕಲಬುರ್ಗಿಯಲ್ಲಿ ಆಹಾರ ಸಚಿವ ಕೆಎಚ್ ಮುನಿಯಪ್ಪ ಹೇಳಿಕೆ ನೀಡಿದರು.

ಇತರೆ ವಿಷಯಗಳು:

ಗೃಹಲಕ್ಷ್ಮಿ ಯೋಜನೆಯ 2 ತಿಂಗಳ ಹಣ ಬಿಡುಗಡೆಗೆ ಹೆಬ್ಬಾಳ್‌ಕರ್‌ ಭರವಸೆ!

ಸುಕನ್ಯಾ ಸಮೃದ್ಧಿ ಖಾತೆ ತೆರೆಯುವ ನಿಯಮದಲ್ಲಿ ಬದಲಾವಣೆ! ಅ.1 ರಿಂದ ಅನ್ವಯ

Leave a Reply

Your email address will not be published. Required fields are marked *

rtgh