ಹಲೋ ಸ್ನೇಹಿತರೆ, ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿಯವರ ಆರ್ಥಿಕ ಅಭಿವೃದ್ಧಿಗಾಗಿ ಕಲ್ಯಾಣ ಯೋಜನೆಗಳನ್ನು ರೂಪಿಸಿಕೊಂಡಿದೆ. 2024-25ನೇ ಸಾಲಿನಲ್ಲಿ ಈ ಯೋಜನೆಗಳಿಗೆ ಅರ್ಜಿ ಅಹ್ವಾನಿಸಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಸಹ ನಿಗಧಿಪಡಿಸಲಾಗಿದೆ. ಯೋಜನೆಗೆ ಅಗತ್ಯವಿರುವ ಅಗತ್ಯ ಮಾಹಿತಿಯ ಬಗ್ಗೆ ಈ ಲೇಖನದಲ್ಲಿ ಸಂಪೂರ್ಣವಾಗಿ ತಿಳಿಸಲಾಗಿದೆ ಕೊನೆವರೆಗೂ ಓದಿ.

ಪರಿಶಿಷ್ಟ ಜಾತಿಯವರ ಆರ್ಥಿಕ ಅಭಿವೃದ್ಧಿಗಾಗಿ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮಗಳಿಂದ ಪರಿಶಿಷ್ಟ ಜಾತಿಯ ಜನಾಂಗದವರಿಂದ ಗಂಗಾ ಕಲ್ಯಾಣ ಯೋಜನೆ, ಮೈಕ್ರೋ ಕ್ರೆಡಿಟ್ ಯೋಜನೆ, ಉದ್ಯಮ ಶೀಲತಾ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಮೈಕ್ರೋ ಕ್ರೆಡಿಟ್ ಯೋಜನೆ
ಈ ಯೋಜನೆಯಡಿಯಲ್ಲಿ ಮಹಿಳಾ ಸ್ವಸಹಾಯ ಸಂಘಗಳಿಗೆ ಕಿರು ಆರ್ಥಿಕ ಚಟುವಟಿಕೆಗಳಿಗೆ ಸಾಲ ಹಾಗೂ ಸಹಾಯಧನ ಸೌಲಭ್ಯ ನೀಡಲಾಗುವುದು. ಘಟಕ ವೆಚ್ಚ 2.50 ಲಕ್ಷ ಹಣದಲ್ಲಿ ಸಹಾಯಧನ 1.50 ಲಕ್ಷ ರೂ. ಸಾಲ 1 ಲಕ್ಷ ರೂ.
ಇದನ್ನು ಓದಿ: ಮಹಿಳೆಯರಿಗೆ 11,000 ರೂ. ಪ್ರೋತ್ಸಾಹಧನ! ಅರ್ಜಿ ಸಲ್ಲಿಕೆಗೆ ಈ ದಾಖಲೆಗಳು ಕಡ್ಡಾಯ
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:
- ಸ್ವ-ಸಹಾಯ ಸಂಘ ನೋಂದಣಿಯಾಗಿರುವುದರ ಪ್ರಮಾಣ ಪತ್ರ ಮತ್ತು ಪೂರಕ ದಾಖಲೆಗಳು.
- ಸದಸ್ಯರ ಆಧಾರ್ ಕಾರ್ಡ.
- ಸಂಘದ ಬ್ಯಾಂಕ್ ಪಾಸ್ ಬುಕ್.
- ಸದಸ್ಯರ ಆಧಾರ್ ಕಾರ್ಡ ಪ್ರತಿ.
ಅರ್ಹ ಸ್ವ-ಸಹಾಯ ಸಂಘದ ಸದಸ್ಯರು ಕೊನೆಯ ದಿನಾಂಕ ಮುಕ್ತಾಯವಾಗುವುದರ ಒಳಗಾಗಿ ನೇರವಾಗಿ ಸೇವಾ ಸಿಂಧು ಪೋರ್ಟಲ್ ಮೂಲಕ ಅಥವಾ ಗ್ರಾಮ ಒನ್/ಕರ್ನಾಟಕ ಒನ್/ಬೆಂಗಳೂರು ಒನ್ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
ಇತರೆ ವಿಷಯಗಳು:
ಭೂರಹಿತ ಮಹಿಳೆಯರಿಗೆ ಭೂ ಚೇತನ ಯೋಜನೆ! ಜಮೀನಿಗಾಗಿ ಅರ್ಜಿ ಆಹ್ವಾನ
ಮಹಿಳೆಯರಿಗೆ 11,000 ರೂ. ಪ್ರೋತ್ಸಾಹಧನ! ಅರ್ಜಿ ಸಲ್ಲಿಕೆಗೆ ಈ ದಾಖಲೆಗಳು ಕಡ್ಡಾಯ